Home ತಾಜಾ ಸುದ್ದಿ ಶಾ ಆಗಮನಕ್ಕೆ ಕ್ಷಣಗಣನೆ: ಸಮಾವೇಶ ಸ್ಥಳಕ್ಕೆ ಆಗಮಿಸಿದ ಬಿಎಸ್‌ವೈ

ಶಾ ಆಗಮನಕ್ಕೆ ಕ್ಷಣಗಣನೆ: ಸಮಾವೇಶ ಸ್ಥಳಕ್ಕೆ ಆಗಮಿಸಿದ ಬಿಎಸ್‌ವೈ

0

ಬಳ್ಳಾರಿ: ಸಂಡೂರು ಪಟ್ಟಣದಲ್ಲಿ ಹಮ್ಮಿಕೊಂಡಿರುವ ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಕೋರ್ ಕಮಿಟಿ ಸದಸ್ಯರ ಸಭೆ ವಿಜಯ ಸಂಕಲ್ಪ ಯಾತ್ರೆಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಅಮಿತ್ ಷಾ ಆಗಮಿಸುತ್ತಿದ್ದು, ಅದಾಗಲೇ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಡೂರು ಪಟ್ಟಣದ ಸಮಾವೇಶದ ಜಾಗಕ್ಕೆ ಆಗಮಿಸಿದರು.
ಹೆಲಿಕಾಪ್ಟರ್ ಮೂಲಕ ಆಗಮಿಸಿದ ಯಡಿಯೂರಪ್ಪ ಪಕ್ಷದ ನಾಯಕರಿಗೆ ಮೀಸಲಾಗಿದ್ದ ವಿಶ್ರಾಂತಿ ಗೃಹದಲ್ಲಿ ತಂಗಿದ್ದರು. ನಾಲ್ಕು ಜಿಲ್ಲೆಗಳ ಲಕ್ಷಾಂತರ ಕಾರ್ಯಕರ್ತರು ತಂಡೋಪತಂಡವಾಗಿ ಸಮಾವೇಶ ಸ್ಥಳಕ್ಕೆ ಆಗಮಿಸಿದ್ದಾರೆ.

Exit mobile version