ಕರ್ನಾಟಕದ ರೈತರಿಗಾಗಿ ಕೇಂದ್ರದಿಂದ 484 ಕೋಟಿ ರೂ ವೆಚ್ಚದ 167 ನೀರಾವರಿ ಯೋಜನೆ

0
20

ಬೆಂಗಳೂರ: ಕರ್ನಾಟಕದ ರೈತರಿಗಾಗಿ ಕೇಂದ್ರದಿಂದ 484 ಕೋಟಿ ರೂ ವೆಚ್ಚದ 167 ನೀರಾವರಿ ಯೋಜನೆ ಶೀಘ್ರವೇ ಅನುಮೋದನೆ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ಅಂದಾಜು 484 ಕೋಟಿ ವೆಚ್ಚದ 167 ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ವಿನಂತಿಸಿದೆನು. ಈ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿದ್ದು, ಈ ಯೋಜನೆಯ ಉದ್ದೇಶ ಕೃಷಿ ಭೂಮಿಯ ಮಟ್ಟದಲ್ಲಿ ನೀರಾವರಿಗಾಗಿ ತಗಲುವ ವೆಚ್ಚವನ್ನು ಸರಳೀಕರಿಸುವುದು/ಕನಿಷ್ಠಗೊಳಿಸುವುದು. ಹೆಚ್ಚಿನ ಕೃಷಿ ಭೂಮಿಯನ್ನು ನೀರಾವರಿ ವಿಧಾನಗಳಿಗೆ ಒಳಪಡುವಂತೆ ಮಾಡುವುದು ಹಾಗೂ ನೀರಾವರಿ ಜಮೀನಿನಲ್ಲಿ ಬಳಸುವ ನೀರು ಸಮರ್ಥವಾಗಿ ಜಮೀನಿಗೆ ಮಾತ್ರ ಬಳೆಕೆಯಾಗುವಂತೆ ನೀರಾವರಿ ಮಾದರಿಯಲ್ಲಿ ದಕ್ಷತೆಯ ಬಗ್ಗೆ ಕಾಳಜಿ ವಹಿಸುವುದು.
ಕರ್ನಾಟಕದ ಅದರಲ್ಲೂ ಪ್ರಮುಖವಾಗಿ ಉತ್ತರ ಕರ್ನಾಟಕದ ಬಹುತೇಕ ಪ್ರದೇಶದ ಹಳ್ಳಗಳು ಮಳೆಗಾಲದಲ್ಲಿ ಪ್ರವಾಹಕ್ಕೆ ತುತ್ತಾಗುತ್ತಿರುವ ಹಿನ್ನಲೆಯಲ್ಲಿ ಅದೇ ಪ್ರವಾಹದ ನೀರನ್ನು ನಿಯಂತ್ರಿಸಿ, ನೀರನ್ನು ಸಂಗ್ರಹಿಸಿ ಕೃಷಿ ಭೂಮಿಗೆ ಬಳಸುವ ನಿಟ್ಟಿನಲ್ಲಿ ಹಾಗೂ ಮುಂಬರುವ ಬೆಳೆಗಳಿಗೆ ರೈತರು ಅದೇ ನೀರಿನ ಸದುಪಯೋಗವನ್ನು ನೀರಾವರಿ ಯೋಜನೆಯಾಗಿ ಪಡೆಯಲು ಈ ಯೋಜನೆ ಅತಿ ಅವಶ್ಯಕವಾಗಿದೆ.
ಕರ್ನಾಟಕದ ಅದರಲ್ಲೂ ಉತ್ತರ ಕರ್ನಾಟಕದ ರೈತರಿಗೆ ಈ ಯೋಜನೆ ಜಾರಿಗೆ ಬಂದ ನಂತರ ಕೃಷಿಗೆ ವರದಾನ ವಾಗುವದಲ್ಲದೇ ಮೋದಿ ಅವರು ರೈತರ ಪರವಾಗಿ ಕೈಗೊಳ್ಳುತ್ತಿರುವ ಅನೇಕ ಯೋಜನೆಗಳಲ್ಲಿ ಇದೂ ಒಂದಾಗಲಿದ್ದು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವಾಗಲು ರೈತರ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದಿಂದ ಕೇಂದ್ರ ಸಚಿವನಾಗಿ ರಾಜ್ಯದ ರೈತರ ಸಮಸ್ಯೆಯನ್ನು ಇಂದು ಕೇಂದ್ರ ಜಲ ಶಕ್ತಿ ಸಚಿವರಿಗೆ ಇಂದು ಮನ ಮುಟ್ಟುವಂತೆ ವಿವರಿಸಿದ್ದು, ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಶೀಘ್ರದಲ್ಲಿಯೇ ರಾಜ್ಯದ ಈ 167 ಯೋಜನೆಗಳಗೆ ಅನುಮೋದನೆ ಸಿಗಲಿದೆ ಎಂದಿದ್ದಾರೆ.

Previous articleಜನತೆಗೆ ಜನಪ್ರತಿನಿಧಿಗಳ ದರ್ಶನ ಭಾಗ್ಯ ಯಾವಾಗ?
Next articleಬಿಜೆಪಿ ಬಹುಮತದಿಂದ ಗೆಲ್ಲುವುದು ಖಚಿತ