ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬರೀ ಸುಳ್ಳು

0
12

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಕಟುವಾಗಿ ಟೀಕಿಸಿದ್ದು, ಇದೊಂದು ಮೋಸದ ಪ್ರಣಾಳಿಕೆ, ಜನರನ್ನ ಮರಳು ಮಾಡುವ ಪ್ರಣಾಳಿಕೆಯಾಗಿದೆ. ಜನರು ಇದನ್ನು ದಿಕ್ಕರಿಸಲಿದ್ದಾರೆ ಎಂದು ಹೇಳಿದರು.
ಆದರ್ಶನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮಾಡಿದ ಕೆಲಸಗಳನ್ನೇ ತಾವು ಮಾಡುವುದಾಗಿ ಹೇಳಿದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬರೀ ಸುಳ್ಳು ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಅನುಷ್ಠಾನ ಮಾಡಲು ಆರು ಲಕ್ಷ‌ ಕೋಟಿ ಅನುದಾನ ಭೇಕು. ಈಗಾಗಲೇ ಬಿಜೆಪಿ ಜಾರಿಗೆ ತಂದ ಯೋಜನೆಗಳನ್ನು, ಪುನಃ ಜಾರಿ ಮಾಡುವುದಾಗಿ ಹೇಳಿದೆ ಎಂದರು.
ಈಗಾಗಲೇ ಜಲ ಜೀವನ ಮಿಷನ್ ಮೂಲಕ ಮನೆಮನೆಗೆ ಕುಡಿಯುವ ನೀರು ಕೊಡುವ ಕೆಲಸ‌ ಆರಂಭಿಸಲಾಗಿದೆ. ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡುವ ವಿಚಾರ.ನಾವು ಈಗಾಗಲೇ ಬಜೆಟ್ ನಲ್ಲಿ ಘೋಷಣೆ ಮಾಡಿದ್ದೇನೆ. ಮೀಸಲಾತಿ ಪ್ರಮಾಣ ಶೇಕಡ 75% ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಹೇಗೆ ಮಾಡ್ತಾರೆ ? ಕೇಂದ್ರದಲ್ಲಿ ಇವರ ಸರ್ಕಾರ ಇದೇನಾ? ಹಿಂದುಳಿದ ಸಮುದಾಯಗಳ ನಿಗಮಗಳನ್ನು ಸ್ಥಾಪಿಸುವುದಾಗಿ ಹೇಳಿದೆ. ನಾನು ಈಗಾಗಲೇ ಘೋಷಣೆ ಮಾಡಿ, ಅದೇಶ ಮಾಡಿದ್ದೇನೆ. ಕಾಂಗ್ರೆಸ್ ಅದನ್ನೇ ಪ್ರಣಾಳಿಕೆಯಲ್ಲಿ‌ ಹೇಳಿದೆ ಎಂದರು.
ಭಜರಂಗದಳ‌ ನಿಷೇಧಿಸುವ ವಿಚಾರವಾಗಿ ಮಾತನಾಡಿ, ಭಜರಂಗದಳ‌ ನಿಷೇದಿಸಲು ಸಾದ್ಯವಿಲ್ಲ. ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಭಜರಂಗದಳ‌ ಇಡೀ ದೇಶದಲ್ಲಿ ಇರುವ ಸಂಘಟನೆ. ಇವರಿಗೆ ದೇಶದಲ್ಲಿ ಅಧಿಕಾರನೇ ಇಲ್ಲ. ಅದನ್ನು ಹೇಗೆ ನಿಷೇಧಿಸಲು ಸಾದ್ಯ?ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಭಜರಂಗದಳ ನಿಷೇಧಿಸುವ ಬಗ್ಗೆ ಮಾತನಾಡಿದ್ದಾರೆ ಎಂದರು.

Previous articleಕೋಹ್ಲಿ ಗಂಭೀರ ವಾಕ್ಸಮರ್ : ಅವಳಿನಗರದ 112 ಕ್ಕೆ ಪೋನ್ ಮಾಡಬೇಕಲ್ಲ
Next articleಪ್ರತಾಪ್ ರೆಡ್ಡಿ ಕಾಂಗ್ರೆಸ್ ಸೇರ್ಪಡೆ