ಬೆಂಗಳೂರು: ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರ ಡಬಲ್ ಸ್ಟೇರಿಂಗ್ ಸರ್ಕಾರ ಈಡೇರಿಸದಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನ, ಬೆಂಗಳೂರಿನಲ್ಲಿ ಗೋವಿಂದ ಕಾರಜೋಳ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಆರ್. ಆಶೋಕ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಗ್ಯಾರಂಟಿಗಳನ್ನು ಈಡೇರಿಸುವುದು ಬಿಟ್ಟು ಸಚಿವಗಿರಿ ಗ್ಯಾರಂಟಿ ಮಾಡುತ್ತಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿಗಳ ಬಗ್ಗೆ ಯಾವುದೇ ಷರತ್ತು ವಿಧಿಸದೆ ಆಶ್ವಾಸನೆ ನೀಡಿತ್ತು, ಈಗೇಕೆ ಷರತ್ತು? ಎಂದು ಪ್ರಶ್ನಿಸಿದ್ದಾರೆ.