ದ.ಕ. ಜಿಲ್ಲೆಯಲ್ಲಿ ಮಳೆ

0
26

ಮಂಗಳೂರು: ಕೇರಳ ಕರಾವಳಿಗೆ ಮುಂಗಾರು ಪ್ರವೇಶಿಸಿದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ೯.೧೫ ರಿಂದ ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಗುಡುಗು ಸಹಿತ ಮಳೆ ಆರಂಭವಾಗಿದೆ.
ಗುರುವಾರ ಮುಂಗಾರು ಕೇರಳ ಪ್ರವೇಶಿಸಿರುವ ಹಿನ್ನಲೆಯಲ್ಲಿ ತಮಿಳುನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶನಿವಾರದಿಂದ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಮಳೆ ಒಂದು ವಾರ ತಡವಾಗಿ ಕರಾವಳಿ ಪ್ರವೇಶಿಸಿದರೂ ವಾಡಿಕೆಯಂತೆ ಮಳೆಗೆ ಕೊರತೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ನಗರ ಸೇರಿ ಕರಾವಳಿಯ ಗ್ರಾಮಾಂತರ ಭಾಗದಲ್ಲಿ ಮಳೆಯಾಗಿದ್ದು, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ ಭಾಗದ ಹಲವಡೆ ಮಳೆಯಾಗಿದೆ.

Previous articleಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ
Next articleದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ