ಶ್ರೀರಂಗಪಟ್ಟಣ: ಕೃಷಿ ಬೆಳೆ ಸಂರಕ್ಷಣೆ ಹಾಗೂ ಜನ- ಜಾನುವಾರುಗಳ ರಕ್ಷಣೆಗಾಗಿ ಸರ್ಕಾರ ಶೀಘ್ರವಾಗಿ ಎಲ್ಲಾ ನಾಲೆಗಳಿಗೂ ನೀರು ಹರಿಸಬೇಕೆಂದು ನೂರಾರು ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಶ್ರೀರಂಗಪಟ್ಟಣದ ಕುವೆಂಪು ವೃತ್ತದ ಬಳಿಯ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು, ಶೀಘ್ರವಾಗಿ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು. ಸಕಾಲಕ್ಕೆ ಮಳೆಯಾಗದ ಹಿನ್ನೆಲೆ ಈಗಾಗಲೇ ಕೃಷಿ ಚಟುವಟಿಕೆಗಳು ಕುಂಟಿತಗೊಂಡಿವೆ. ಇನ್ನು ಬೆಳೆದಿರುವ ಬೆಳೆಗಳ ರಕ್ಷಣೆಗಾದರೂ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟಕ್ಕೆ ರೈತರು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
