ರಾಜಸ್ಥಾನ: ರಾಜಸ್ಥಾನದಲ್ಲಿ ಬಿಜೆಪಿಯು ಬಹುಮತದಿಂದ ಗೆಲ್ಲುವುದು ಖಚಿತ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ರಾಜಸ್ಥಾನದ ಚುನಾವಣ ಪ್ರಚಾರದಲ್ಲಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ರಾಜಸ್ಥಾನದಲ್ಲಿ ಬಿಜೆಪಿಯು ಬಹುಮತದಿಂದ ಗೆಲ್ಲುವುದು ಖಚಿತ. ದೇಶದ ಅಭಿವೃದ್ಧಿಯ ಬಗ್ಗೆ ಉತ್ತಮ ವಿಚಾರಧಾರೆಯುಳ್ಳ ನಾಯಕರು ಬಿಜೆಪಿ ಸೇರುತ್ತಿದ್ದಾರೆ. ಇದಕ್ಕೆ ಉದಯಪುರದಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರ ರ್ಯಾಲಿ ಉತ್ತಮ ಉದಾಹರಣೆಯಾಗಿದೆ. ಅಶೋಕ್ ಗೆಹ್ಲೋಟ್ ಅವರು ವಿದಾಯ ಹೇಳುವ ಸಮಯ ಕೂಡಿ ಬಂದಿದೆ ಎಂದಿದ್ದಾರೆ.