ಕೋಲಾರ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಿಂದ ತಿರುಪತಿಗೆ ತೆರಳುತ್ತಿದ್ದ ಟಿಟಿ ವಾಹನಕ್ಕೆ ಮಾರ್ಗ ಮಧ್ಯೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
9 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆಂಧ್ರಪ್ರದೇಶದ ಮದನಪಲ್ಲಿಯ ಕುರುಬಲಕೋಟ ಮಂಡಲಂ ಚೆನ್ನಾಮಗ್ರಿ ಮಿಟ್ಟ ಬಳಿ ಘಟನೆ ನಡೆದಿದೆ. ಬಾಗೇಪಲ್ಲಿ ತಾಲ್ಲೂಕಿನ ಮೇಘರ್ಷ್ (17), ಚರಣ್(17) ಹಾಗೂ ಶ್ರಾವಣಿ (28)ಮೃತ ದುರ್ದೈವಿಗಳು. ಬಾಗೇಪಲ್ಲಿಯಿಂದ ತಿರುಪತಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಘಟನೆ ನಡೆದಿದೆ.