ಭೂಮಿ ಹಂಚಿಕೆಯಲ್ಲಿ ಅವ್ಯವಹಾರ: ಪರಿಷತ್‌ನಲ್ಲಿನ ಚರ್ಚೆ

0
23
ವಿಧಾನ ಪರಿಷತ್‌

ಬೆಂಗಳೂರು: ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ಕೊಡುವಲ್ಲಿ ಅನ್ಯಾಯ ಮಾಡಲಾಗಿದೆ ಎಂದು ವಿಧಾನ ಪರಿಷತ್‌ ಕಲಾಪದಲ್ಲಿ ಸದಸ್ಯರು ಆರೋಪ ಮಾಡಿದ್ದು ವ್ಯಾಪಕ ಚರ್ಚೆಗೆ ಗ್ರಾಸವಾಯಿತು.
ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‍ನಲ್ಲಿ ಬ್ರಿಗೆಡ್ ರಿಯಲ್ ಎಸ್ಟೇಟ್ ಸಂಸ್ಥೆಗೆ ಎರಡು ಹಂತದಲ್ಲಿ ಹತ್ತಾರು ಎಕರೆಯನ್ನು ಕೆಐಎಡಿಬಿಯಿಂದ ನೀಡಲಾಗಿದೆ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಡಲು ಹೇಳಲಾಗಿತ್ತು. ಆದರೆ, ಅದರಲ್ಲಿ ಯಾವುದೇ ನಿಯಮ ಪಾಲನೆಯಾಗಿಲ್ಲ. ಅರ್ಹ ಕೈಗಾರಿಕೋದ್ಯಮಿಗಳಿಗೆ ಭೂಮಿ ನೀಡಲಾಗದೆ ಅನ್ಯಾಯ ಮಾಡಲಾಗಿದೆ. ಸರ್ಕಾರಕ್ಕೂ ನಷ್ಟವಾಗಿದೆ ಎಂದು ಮರಿತಿಬ್ಬೇಗೌಡ ಹೇಳಿದರು.
ಇದಕ್ಕೆ ಉತ್ತರಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕೋದ್ಯಮಿಗಳಿಗೆ ಭೂಮಿ ಹಂಚಿಕೆ ಮಾಡುವಾಗ ಉದ್ಯಮ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುವವರು ಹತ್ತಿರದಲ್ಲೇ ವಾಸ ಮಾಡಲು ಅಗತ್ಯವಾದ ವಸತಿ ನಿರ್ಮಿಸಲು, ಅದಕ್ಕೆ ಪೂರಕವಾಗಿ ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸೇರಿ ಇತರ ಸೌಲಭ್ಯಗಳನ್ನು ಕಲ್ಪಿಸಲು ಮಂಜೂರಾದ ಭೂಮಿಯಲ್ಲಿ ಶೇ. 15ರಷ್ಟು ಭೂಮಿಯನ್ನು ವಸತಿ, ಆಸ್ಪತ್ರೆ, ಶಾಲೆ ಕಟ್ಟಲು ಬಳಕೆ ಮಾಡಿಕೊಳ್ಳುತ್ತಿದ್ದು, 11 ಟವರ್ ನಿರ್ಮಿಸುವ ಗುರಿ ಇದೆ. ಈಗಾಗಲೇ ಏಳು ಟವರ್ ನಿರ್ಮಿಸಲಾಗಿದೆ ಎಂದು ಉತ್ತರಿಸಿದರು.

Previous articleಕೊಲೆ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರಿ: ಪ್ರವೀಣ್ ನೆಟ್ಟಾರು ಹೆತ್ತವರ ಆಗ್ರಹ
Next articleʻಕುಟುಂಬ ರಾಜಕಾರಣ ನಾವಷ್ಟೆ ಮಾಡಿಲ್ಲʼ