ಮತಯಂತ್ರ‌ ಪೀಸ್‌ ಪೀಸ್

0
28

ವಿಜಯಪುರ: ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

Previous articleಮುಗ್ಧತೆಯ ಪ್ರತಿರೂಪ
Next articleಅಮೆರಿಕಾದಿಂದ ಬಂದರೂ ಮತದಾನದಿಂದ ವಂಚಿತನಾದ ಮತದಾರ!