ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ ವಾರ್ ನಡೆದಿದೆ.
ರಾಜ್ಯದಲ್ಲಿ ಅದಾನಿ ಗ್ರೂಪ್ ಹೂಡಿಕೆಗೆ ಮುಕ್ತ ಅವಕಾಶ ನೀಡುವುದಾಗಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಕ್ಕೆ ಟಾಂಗ್ ನೀಡಿರುವ ಬಿ.ಎಲ್.ಸಂತೋಷ್ ಅವರ ನಾಯಕ ರಾಹುಲ್ ಗಾಂಧಿಯವರ ಸ್ಥಾನವನ್ನು ಎಂ.ಬಿ.ಪಾಟೀಲ್ ಅವರು ತೋರಿಸುತ್ತಿದ್ದಾರೆ. ಹಿಂದೆ ರಾಹುಲ್ ಗಾಂಧಿ ಅದಾನಿ ಕಂಪನಿಯ ಬೆಳವಣಿಗೆಗೆ ಕೇಂದ್ರದ ಬಿಜೆಪಿ ಸರ್ಕಾರವೇ ಸಹಕಾರ ನೀಡುತ್ತಿದೆ ಎಂಬ ಆರೋಪಗಳನ್ನು ವ್ಯಾಪಕವಾಗಿ ಮಾಡುತ್ತಾ ಟೀಕಿಸುತ್ತಿದ್ದರು. ಈಗ ಎಂ.ಬಿ.ಪಾಟೀಲ್ ಅವರು ಅದಾನಿ ಗುಂಪಿನ ಹೂಡಿಕೆಗೆ ಅವಕಾಶ ನೀಡುವುದಾಗಿ ಹೇಳಿರುವುದನ್ನು ಬಿ.ಎಲ್. ಸಂತೋಷ್ ಪರೋಕ್ಷವಾಗಿ ಲೇವಡಿ ಮಾಡಿದ್ದರು.
ಅದಕ್ಕೆ ತಿರುಗೇಟು ನೀಡಿರುವ ಸಚಿವ ಎಂ.ಬಿ.ಪಾಟೀಲ್, ಬಿ.ಎಲ್.ಸಂತೋಷ್ ಅವರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ. ಇದೀಗ ಉಳಿದಿರುವ, ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರನ್ನು ಮುಗಿಸಲು ಅವರ ವಿರುದ್ಧ ಬಸನಗೌಅ ಯತ್ನಾಳ
ಅವರನ್ನು ಎತ್ತಿ ಕಟ್ಟಿ, ಜೊತೆಗೆ ನಿಮ್ಮ ಪಟ್ಟಾ ಶಿಷ್ಯ ಪ್ರತಾಪ ಸಿಂಹ ಅವರ ಹೆಗಲ ಮೇಲೆ ಬಂದೂಕು ಇಟ್ಟು ಗುರಿನೆಟ್ಟಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಕರ್ನಾಟಕದ ಇತ್ತೀಚಿನ ರಾಜಕಾರಣವನ್ನು ಒಂದೇ ವಾಕ್ಯದಲ್ಲಿ ಹೇಳುವುದಾದರೆ,
ವಿಶ್ವೇಶ್ವರ ಭಟ್ರವರು ಹೇಳಿರುವ “ಅತಿಯಾದ ‘ಸಂತೋಷ’ವೇ ದುಃಖಕ್ಕೆ ಕಾರಣ” … ಲಿಂಗಾಯತರ ನಂತರ ನಿಮ್ಮ ಗುರಿ ಒಕ್ಕಲಿಗರಾ, ದಲಿತರಾ…??? ಎಂದು ಪ್ರಶ್ನಸಿದ್ದಾರೆ.