‘ಸಂವಿಧಾನ ಬಚಾವೋ, ದೇಶ್​ ಬಚಾವೋ’

0
8
ಸಂವಿಧಾನ

ಮೈಸೂರು: ಬಿಜೆಪಿಯಿಂದ ಮೀಸಲಾತಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ‘ಸಂವಿಧಾನ ಬಚಾವೋ, ದೇಶ್​ ಬಚಾವೋ’ ಹೆಸರಲ್ಲಿ ಮೈಸೂರಿನ ಪುರಭವನದ ಮುಂಭಾಗ ಕಾಂಗ್ರೆಸ್ ಧರಣಿ ನಡೆಸಿದೆ.
ಈ ವೇಳೆ ಸಿದ್ದರಾಮಯ್ಯ ಮಾತನಾಡಿ, ಸಂವಿಧಾನದ ಮಾನ್ಯತೆ ಇಲ್ಲದ ರೀತಿ ಮೀಸಲಾತಿ ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ಮೀಸಲಾತಿ ಹೆಚ್ಚಳವೇ ಅವೈಜ್ಞಾನಿಕ. ಚುನಾವಣೆಗಾಗಿ ಬಿಜೆಪಿ ಈ ಗಿಮಿಕ್ ಮಾಡಿದೆ. ಆದರೆ ಮೀಸಲಾತಿ ಹೆಚ್ಚಳ ಬಿಜೆಪಿಗೆ ತಿರುಗುಬಾಣ ಆಗಲಿದೆ ಎಂದರು.
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್, ತನ್ವೀರ್ ಸೇಠ್ ಪ್ರತಿಭಟನೆಯಲ್ಲಿದ್ದರು.

Previous articleಕಾರಾಗೃಹಕ್ಕೆ ಪೊಲೀಸ್‌ ಅಧಿಕಾರಿಗಳ ದಿಢೀರ್‌ ದಾಳಿ
Next articleಮಾಜಿ ಕ್ರಿಕೆಟಿಗ್‌ ದುರಾನಿ ಇನ್ನಿಲ್ಲ