Home Advertisement
Home ತಾಜಾ ಸುದ್ದಿ ಸಂಸದೆ ಸುಮಲತಾ ವೇದಿಕೆ ಏರುವ ವಿಚಾರ: ʻದಳʼ, ʼಕೈʼ ಕಾರ್ಯಕರ್ತರ ನಡುವೆ ಹೈಡ್ರಾಮಾ

ಸಂಸದೆ ಸುಮಲತಾ ವೇದಿಕೆ ಏರುವ ವಿಚಾರ: ʻದಳʼ, ʼಕೈʼ ಕಾರ್ಯಕರ್ತರ ನಡುವೆ ಹೈಡ್ರಾಮಾ

0
145

ಮಂಡ್ಯ: ಜಿಲ್ಲೆಯ ಪ್ರಸಿದ್ಧ ಮಹದೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ವೇದಿಕೆಗೆ ಆಗಮಿಸುತ್ತಿದ್ದಂತೆ ಭಾರೀ ಹೈಡ್ರಾಮಾ ಸೃಷ್ಟಿಯಾಗಿದೆ. ಬಳಿಕ ಕೈಕೈ ವಿಲಾಯಿಸಿಕೊಂಡು ʻದಳʼ, ʼಕೈʼ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ.
ಮಹದೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಕ್ಕೆ ಮಂಡ್ಯ ಸಂಸದೆ ಸುಮಲತಾ ವೇದಿಕೆಯಲ್ಲಿ ಏರುವ ವಿಚಾರಕ್ಕೆ ಪರಸ್ಪರ ಜೆಡಿಎಸ್‌-ಕಾಂಗ್ರೆಸ್‌ ನಾಯಕರ ನಡುವೆ ವಾಗ್ವಾದ ತೀವ್ರಗೊಂಡು ಕೈ ಕೈ ವಿಲಾಯಿಸಿ ಗಲಾಟೆ ನಡೆಸಿದ್ದಾರೆ. ಗಲಾಟೆ ಕಂಡು ಮಂಡ್ಯ ಸಂಸದೆ ಸುಮಲತಾ ವೇದಿಕೆಯಿಂದ ಹೊರ ನಡೆದರು.