ಮಂಡ್ಯ: ಕನ್ನಡಿಗರ ಹಿತ ಕಡೆಗಣಿಸಿ ಕರ್ನಾಟಕ ಕಾಂಗ್ರೆಸ್ ಸರಕಾರ ಏಕಪಕ್ಷೀಯವಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಪರಿಣಾಮ ಕೃಷ್ಣರಾಜಸಾಗರ ಜಲಾಶಯ ಬರಿದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ. ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು. ರಾಜ್ಯದ ಪಾಲಿನ ಸಮೃದ್ಧಿಯ ಸಂಕೇತ ಕನ್ನಂಬಾಡಿ ಅಣೆಕಟ್ಟೆ ಭಣಗುಡುತ್ತಿದೆ. ಮಾಜಿ ಸಚಿವರಾದ ಜಿ.ಟಿ.ದೇವೇಗೌಡರು, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮುನಿರತ್ನ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ನಿಖಿಲ್ ಕುಮಾರ್, ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್ ಸೇರಿ ಪಕ್ಷದ ಹಲವಾರು ಪ್ರಮುಖ ಮುಖಂಡರು ಅವರ ಜತೆಯಲ್ಲಿ ಇದ್ದರು.
