ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.
ಶೀತ ಮತ್ತು ಗಂಟಲು ನೋವಿನಿಂದ ಬಳಲುತ್ತಿರುವ ಅವರು ಇಂದು ಯಾರನ್ನೂ ಭೇಟಿ ಮಾಡಿಲ್ಲ. ಸಿಎಂ ಭೇಟಿ ಮಾಡಲು ಬಂದಿದ್ದ ಅಧಿಕಾರಿಗಳು ಕೂಡ ಭೇಟಿಯಾಗದೆ ವಾಪಸ್ ತೆರಳಿದ್ದಾರೆ.
ಅನೇಕ ದಿನಗಳಿಂದ ನಿರಂತರ ಕೆಲಸದಿಂದ ಸಿದ್ದರಾಮ್ಯಯನವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗುತ್ತಿದೆ. ಹೀಗಾಗಿ ಇಂದಿನ ಬಹುತೇಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.