RSS ಬಗ್ಗೆ ಕಾಂಗ್ರೆಸಿಗರ ಹೇಳಿಕೆ ಖಂಡನೀಯ

0
13

ಮಂಗಳೂರು: ದೇಶಕ್ಕೆ ಆಪತ್ತು ಬಂದಾಗ, ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಯಾರ ಆದೇಶಕ್ಕೆ ಕಾಯದೆ ಮುಂಚೂಣಿಯಲ್ಲಿ ನಿಂತು ಸಂತ್ರಸ್ತರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಚಿವ ಪ್ರಿಯಾಂಕ‌ ಖರ್ಗೆ ಯವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ RSS ನ್ನು ನಿಷೇಧಿಸುತ್ತೇವೆ ಎನ್ನುವ ಉದ್ಧಟತನದ ಮಾತನಾಡಿದ್ದಾರೆ‌. ಇದನ್ನು ಸಮರ್ಥಿಸಿ ಮಂಜುನಾಥ ಭಂಡಾರಿಯವರು ಹೇಳಿಕೆ ಯನ್ನು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಇದನ್ನು ಖಂಡಿಸಿದ್ದಾರೆ ಮತ್ತು ಭವಿಷ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ತಿರುಕನ‌ ಕನಸು ಎಂದು ಅವರು ಲೇವಡಿ‌ ಮಾಡಿದ್ದಾರೆ.
ನೂರು ವರುಷದ ಇತಿಹಾಸವುಳ್ಳ ಸಂಘವು ವ್ಯಕ್ತಿ ಪ್ರತಿಷ್ಠೆಗಾಗಿ, ಅಧಿಕಾರದ ಲಾಲಸೆಗಾಗಿ ಯಾವುದೇ ಕಾರ್ಯ ನಡೆಸಿಲ್ಲ. ಹಿಂದು ಸಮಾಜದ ಸಂಘಟನೆಯ ಜತೆಯಲ್ಲಿ ರಾಷ್ಟ್ರ ಚಿಂತನೆ ಈ ಮೂಲಕ ವಿಶ್ವಗುರು ಭಾರತ ನಿರ್ಮಾಣದ ಪರಿಕಲ್ಪನೆ ಯಲ್ಲಿ ಮುನ್ನಡೆಯುತ್ತಿದೆ.‌ ಅಲ್ಪಸಂಖ್ಯಾತರೇ ಅಧಿಕವಿರುವ ಕಾಶ್ಮೀರದಲ್ಲಿ ಪ್ರವಾಹ ಬಂದ ಸಂಧರ್ಭದಲ್ಲಿಯೂ ಸಂಘದ ಸ್ವಯಂ ಸೇವಕರು ಪ್ರಾಣದ ಹಂಗು ತೊರೆದು ಸಂತ್ರಸ್ತರ ರಕ್ಷಣೆಗೆ ದಾವಿಸಿದ್ದರು ಎನ್ನುವುದನ್ನು ಖರ್ಗೆ ನೆನಪಿಸಲಿ ಎಂದು ಕುಂಪಲ ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ರವರು ರಚಿಸಿರುವ ಭಾರತದ ಸಂವಿಧಾನವನ್ನು ಗೌರವಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಮಾತನಾಡುವ ಮುಂಚಿತವಾಗಿ ಸಂವಿಧಾನದ ಆಶಯಗಳಿಗೆ ವಿರುದ್ದವಾಗಿ ನಡೆದಿರುವ, ಅಧಿಕಾರದ ಉಳಿವಿಗಾಗಿ ಸಂವಿಧಾನಕ್ಕೆ ವ್ಯಾಪಕ ತಿದ್ಧುಪಡಿ ಮಾಡಿ ವಿರೂಪಗೊಳಿಸಿರುವ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಘನಘೋರ ಹತ್ಯೆಮಾಡಿ ತುರ್ತು ಪರಿಸ್ಥಿತಿ ಘೋಷಿಸಿದ ದಿವಂಗತ ಇಂಧಿರಾ ಗಾಂಧಿಯ ಸರ್ವಾಧಿಕಾರದ ಬಗ್ಗೆ ಪ್ರಿಯಾಂಕಾ ಖರ್ಗೆ ಮಾತನಾಡಲಿ. ಅಂಬೇಡ್ಕರ್ ರವರನ್ನು ಚುನಾವಣೆಯಲ್ಲಿ ಸೋಲಿಸಲು ಪಣತೊಟ್ಟು ಕೆಲಸ ಮಾಡಿದ ಮತ್ತು ಅವರ ನಿಧನ ಬಳಿಕ ಅಂತ್ಯ ಸಂಸ್ಕಾರಕ್ಕೂ ದೆಹಲಿಯಲ್ಲಿ ಅವಕಾಶ ನೀಡದ ನೆಹರೂ ಬಗ್ಗೆ ಜನಸಾಮಾನ್ಯರಿಗೆ ಹೇಳಲಿ ಎಂದಿದ್ದಾರೆ.

Previous articleಕಲ್ಯಾಣ ಕರ್ನಾಟಕ: ಪ್ರಗತಿ ಪಥ, ಕಲ್ಯಾಣ ಪಥ, ಹಸಿರು ಪಥ, ಕಲ್ಯಾಣಿಗಳ ಪುನರುಜ್ಜೀವನಕ್ಕಾಗಿ ನೀಲ ನಕ್ಷೆ
Next articleಮಂಡ್ಯ ಜಿಲ್ಲೆಗೆ ೨೫ ಸಾವಿರ ಕೋಟಿ ಅನುದಾನ ಕೊಡಿಸಲಿ: ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲು