Home Advertisement
Home ತಾಜಾ ಸುದ್ದಿ ಅಗೌರವ ತೋರಿದ ಬಿಜೆಪಿಯ 10 ಶಾಸಕರ ಅಮಾನತು

ಅಗೌರವ ತೋರಿದ ಬಿಜೆಪಿಯ 10 ಶಾಸಕರ ಅಮಾನತು

0
99

ಬೆಂಗಳೂರು: ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ವಿಧಾನಸಭೆ ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಮಂದಿ ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಬಿಜೆಪಿ ಸದಸ್ಯರಾದ ಡಾ. ಸಿಎನ್ ಅಶ್ವತ್ಥ ನಾರಾಯಣ, ಸುನೀಲ್ ಕುಮಾರ್, ಆರ್ ಅಶೋಕ್, ವೇದವಾಸ ಕಾಮತ್, ಯಶ್ ಪಾಲ್ ಸುವರ್ಣ, ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಅರವಿಂದ‌ ಬೆಲ್ಲದ, ಧೀರಜ್ ಮುನಿ ರಾಜ್, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.