SK Home Ad
Home ಅಪರಾಧ ಅಶ್ಲೀಲ ಸಂದೇಶ ಕಳುಹಿಸಿದ್ದು ನಿಜ

ಅಶ್ಲೀಲ ಸಂದೇಶ ಕಳುಹಿಸಿದ್ದು ನಿಜ

0
162

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ೧ ಆರೋಪಿಯಾಗಿರುವ ಪವಿತ್ರಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿರುವುದು ನಿಜ ಎಂದು ಇನಸ್ಟಾಗ್ರಾಮ್ ದೃಢಪಡಿಸಿದೆ. ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಆತನ ಮೊಬೈಲ್ ಹುಡುಕಾಡಿದ್ದರು. ಅದು ಸಿಗಲಿಲ್ಲ. ಕೊನೆಗೆ ಇನಸ್ಟಾಗ್ರಾಮ್‌ಗೆ ಮೊರೆ ಹೋಗಿದ್ದರು. ರಿಟ್ರೀವ್ ಮಾಡಿದ ಆ ಸಂಸ್ಥೆಯವರಿಗೆ ರೇಣುಕಾಸ್ವಾಮಿ ಅಂತಹ ಸಂದೇಶ ಕಳುಹಿಸಿರುವುದು ನಿಜ ಎಂದು ಹೇಳಿದ್ದಾರೆ. ಈ ವರದಿಯನ್ನು ತನಿಖಾಧಿಕಾರಿಗಳು ಚಾರ್ಜ್ಶೀಟ್‌ನಲ್ಲಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.