Home ಅಪರಾಧ ಕಾಲುವೆಗೆ ಬಿದ್ದ ಓರ್ವಳನ್ನು ರಕ್ಷಿಸಲು ಹೋದ ಇಬ್ಬರು ಸೇರಿ ಮೂವರು ನೀರು ಪಾಲು

ಕಾಲುವೆಗೆ ಬಿದ್ದ ಓರ್ವಳನ್ನು ರಕ್ಷಿಸಲು ಹೋದ ಇಬ್ಬರು ಸೇರಿ ಮೂವರು ನೀರು ಪಾಲು

0

ಚಿಕ್ಕಮಗಳೂರು: ಕಾಲುವೆಗೆ ಆಕಸ್ಮಿಕವಾಗಿ ಬಿದ್ದ ಒಬ್ಬರನ್ನು ರಕ್ಷಿಸಲು ಮುಂದಾದ ವೇಳೆ ಮೂವರು ಕಾಲುವೆಗೆ ಬಿದ್ದು ಮೃತಪಟ್ಟ ಹೃದಯ ವಿದ್ರಾವ ಘಟನೆಯೊಂದು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ.
ರವಿ (31), ಅನನ್ಯ (17), ಶಾಮವೇಣಿ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದು, ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು ಮುಂದಾಗಿದ್ದು, ಈ ವೇಳೆ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ.
ಮೃತ ರವಿ ಮೂಲತಃ ಲಕ್ಕವಳ್ಳಿ ನಿವಾಸಿ, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳಾಗಿದ್ದಾರೆ. ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರಾಗಿದ್ದಾರೆ. ಸಂಬಂಧಿ ಮನೆ ಲಕ್ಕವಳ್ಳಿಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ. ಸದ್ಯ ರವಿ ಮೃತದೇಹ ಪತ್ತೆಯಾಗಿದೆ, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version