ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷ ಸದಸ್ಯರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಆಯೇಷಾ ಖಾನಂ ಅವರಿಗೆ ಹಾಗೂ ಎಲ್ಲಾ ನೂತನ ಸದಸ್ಯರುಗಳಿಗೆ ಅಭಿನಂದನೆಗಳು.
ತಮ್ಮ ಮುಂದಾಳತ್ವದಲ್ಲಿ ಪತ್ರಕರ್ತರಲ್ಲಿ ವೃತ್ತಿಪರತೆ ಮತ್ತು ವೃತ್ತಿ ಕೌಶಲದ ಸುಧಾರಣೆಗೆ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಾಧ್ಯಮ ಅಕಾಡೆಮಿ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸಲಿ ಎಂದು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದಿದ್ದಾರೆ.