ಕುಂಭಮೇಳಕ್ಕೆ ಹೋಗಿದ್ದ ಯುವಕ ವಿದ್ಯುತ್ ಶಾಕ್‌ನಿಂದ ಸಾವು

0
32

ಕೊಪ್ಪಳ(ಕಾರಟಗಿ): ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸಿ ಅಯೋಧ್ಯೆಗೆ ಹೊರಟಿದ್ದ ತಾಲ್ಲೂಕಿನ ಸಿದ್ಧಾಪುರ ಗ್ರಾಮದ 27 ವರ್ಷದ ಪ್ರವೀಣ ಮಲ್ಲಿಕಾರ್ಜುನ ಹೊಸಮನಿ(ಹಗೇದಾಳ) ಎಂಬ ಯುವಕ ಉತ್ತರ ಪ್ರದೇಶದ ಗೋರಖ್‌ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಘಟನೆ ನಡೆದಿದೆ.
ಈ ಕುರಿತು ಗೋರಖ್‌ಪುರ ಪೊಲೀಸ್‌ರಿಂದ ಸಿದ್ಧಾಪುರ ಗ್ರಾಮದ ಮೃತ ಯುವಕನ ಕುಟುಂಬಕ್ಕೆ ಮಾಹಿತಿ ಬಂದಿದೆ.
ಜ. 13ರಿಂದ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ಆರಂಭವಾಗುತ್ತಿದ್ದಂತೆ ತಾಲ್ಲೂಕಿನ ಸಿದ್ಧಾಪುರ ಗ್ರಾಮದ ಯುವಕ ಪ್ರವೀಣ ಹೊಸಮನಿ ಮೇಳಕ್ಕೆ ಹೋಗಿದ ನಿನ್ನೆವರೆಗೂ ಪ್ರಯಾಗ್‌ರಾಜ್‌ನಲ್ಲಿ ಇದ್ದು, ಸೋಮವಾರ ಅಯೋಧ್ಯೆಗೆ ಹೊರಟಿದ್ದರು. ಮಾರ್ಗ ಮಧ್ಯೆ ಉತ್ತರ ಪ್ರದೇಶದ ಸಿದ್ಧಾರ್ಥ ಜಿಲ್ಲೆಯ ಗೋರಖ್‌ಪುರ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ವಿದ್ಯುತ್ ತಗಲಿ ತೀವ್ರ ಗಾಯಗೊಂಡಿದ್ದಾನೆ.
ಸ್ಥಳದಲ್ಲಿದ್ದ ರೈಲ್ವೆ ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೇ ಗೋರಖ್‌ಪುರ ಬಿಆರ್‌ಡಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ 2ಕ್ಕೆ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದು ಸಿದ್ಧಾಪುರ ಗ್ರಾಮದ ಮೃತ ಯುವಕನ ಮನೆಗೆ ತಹಶೀಲ್ದಾರ್ ಎಂ.ಕುಮಾರಸ್ವಾಮಿ ತೆರಳಿ ಪಾಲಕರಿಗೆ ಮಾಹಿತಿ ನೀಡಿದ್ದು, ಯುವಕನ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ತಯಾರಿ ನಡೆಸಿದ್ದಾರೆ.

Previous articleಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ
Next articleಈಶ್ವರಪ್ಪ ಸಿಎಂ ಮಾಡದ್ದೇ ಬಿಜೆಪಿಗೆ ನಷ್ಟ