Home Advertisement
Home ಸುದ್ದಿ ದೇಶ ಖರ್ಗೆ ನೇತೃತ್ವದಲ್ಲಿ ಅದಾನಿ ಗ್ರೂಪ್ ವಿರುದ್ಧ ತನಿಖೆಗೆ ವಿಪಕ್ಷಗಳ ಒತ್ತಾಯ

ಖರ್ಗೆ ನೇತೃತ್ವದಲ್ಲಿ ಅದಾನಿ ಗ್ರೂಪ್ ವಿರುದ್ಧ ತನಿಖೆಗೆ ವಿಪಕ್ಷಗಳ ಒತ್ತಾಯ

0
109

ಎಸ್​ಬಿಐ ಮತ್ತು ಎಲ್​ಐಸಿಯಲ್ಲಿರುವ ಬಹಳಷ್ಟು ಸಾರ್ವಜನಿಕರ ಹಣವು ಅದಾನಿ ಗ್ರೂಪ್​ಗಳಲ್ಲಿ ಹೂಡಿಕೆಯಾಗಿದೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕೋಟ್ಯಂತರ ಜನರ ಹಣವು ಎಲ್​ಐಸಿ ಮತ್ತು ಎಸ್​ಬಿಐನಂತರ ಸಂಸ್ಥೆಗಳ ಮೂಲಕ ಕೆಲ ಆಯ್ದ ಕಂಪನಿಗಳಿಗೆ ಸಂದಾಯವಾಗಿದೆ. ಈ ಕಂಪನಿ (ಅದಾನಿ ಎಂಟರ್ಪ್ರೈಸಸ್) ಬಗ್ಗೆ ಹಿಂಡನ್ಬರ್ಗ್ ರೀಸರ್ಚ್ ವರದಿಯಲ್ಲಿ ಎತ್ತಿತೋರಿಸಲಾಗಿದೆ. ಅದಾದ ಬಳಿಕ ಆ ಕಂಪನಿಯ ಷೇರುಗಳು ಬಿದ್ದಿವೆ. ಈ ಕಂಪನಿಯ ಮಾಲೀಕ ಯಾರು ಎಂದು ನಿಮಗೆ ಗೊತ್ತು. ಇಂಥ ಕಂಪನಿಗಳಿಗೆ ಸರ್ಕಾರ ಯಾಕೆ ಹಣ ಕೊಡುತ್ತಿದೆ? ಎಲ್​ಐಸಿ, ಎಸ್​ಬಿಐ ಮೊದಲಾದ ಸಂಸ್ಥೆಗಳು ಈ ಕಂಪನಿಗೆ ಹಣ ಕೊಟ್ಟಿವೆ. ಇದರ ತನಿಖೆ ಆಗಬೇಕು. ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ಆಗಬೇಕು ಅಥವಾ ಭಾರತೀಯ ಮುಖ್ಯ ನ್ಯಾಯಮೂರ್ತಿ ಮಾರ್ಗದರ್ಶನದಲ್ಲಿ ಸಮಿತಿ ರಚನೆಯಾಗಿ ಅದರಿಂದಲಾದರೂ ತನಿಖೆ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.