SK Home Ad
Home ನಮ್ಮ ಜಿಲ್ಲೆ ಕಲಬುರಗಿ ಗೃಹಲಕ್ಷ್ಮೀ ಯೋಜನೆ ಕಟ್ಟುನಿಟ್ಟಾಗಿ ತಲುಪಲು ವಿಶೇಷ ಶಿಬಿರ

ಗೃಹಲಕ್ಷ್ಮೀ ಯೋಜನೆ ಕಟ್ಟುನಿಟ್ಟಾಗಿ ತಲುಪಲು ವಿಶೇಷ ಶಿಬಿರ

0
162

ಕಲಬುರಗಿ: ಗೃಹಲಕ್ಷ್ಮೀ ಯೋಜನೆಯ ಲಾಭ ಎಲ್ಲಾ ಫಲಾನುಭವಿಗಳಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾಡಿನ ಮಹಿಳೆಯರ ಆರ್ಥಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ, ಜನಪರ ಆಡಳಿತದ ಮೂಲಕ ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ. ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ
ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೇಟ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.