Home Advertisement
Home ತಾಜಾ ಸುದ್ದಿ ಧರ್ಮಸ್ಥಳದಲ್ಲಿ ನಾನು ಆಣೆ ಮಾಡಿದರೆ ಯಾರು ನಂಬುತ್ತಾರೆ?

ಧರ್ಮಸ್ಥಳದಲ್ಲಿ ನಾನು ಆಣೆ ಮಾಡಿದರೆ ಯಾರು ನಂಬುತ್ತಾರೆ?

0
147

ನವದೆಹಲಿ: ನಾನೊಬ್ಬ ಕ್ರಿಶ್ಚಿಯನ್ ಧರ್ಮಸ್ಥಳದಲ್ಲಿ ಆಣೆ ಮಾಡಿದರೆ ಯಾರು ನಂಬುತ್ತಾರೆ? ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ.
ಕರ್ನಾಟಕ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಹೆಚ್.ಡಿ ಕುಮಾರಸ್ವಾಮಿಯವರ ಆಣೆ ಪ್ರಮಾಣ ವಿಷಯವಾಗಿ ಮಾತನಾಡಿದ ಅವರು, ನಾನೊಬ್ಬ ಕ್ರಿಶ್ಚಿಯನ್ ಧರ್ಮಸ್ಥಳದಲ್ಲಿ ಆಣೆ ಮಾಡಿದರೆ ಯಾರು ನಂಬುತ್ತಾರೆ? ಆತ್ಮಸಾಕ್ಷಿ ನನ್ನ ದೇವರು ಅದರ ಆಣೆಗೂ ನಾನು ಯಾವುದೇ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.