Home Advertisement
Home ತಾಜಾ ಸುದ್ದಿ ನನ್ನ ಕ್ಷೇತ್ರದ ತೀರ್ಮಾನ ಮಾಡೋಕೆ ಬಿಎಸ್‌ವೈ ಯಾರು?

ನನ್ನ ಕ್ಷೇತ್ರದ ತೀರ್ಮಾನ ಮಾಡೋಕೆ ಬಿಎಸ್‌ವೈ ಯಾರು?

0
141
ಸಿದ್ದು

ವಿಜಯಪುರ: ನಾನು ಎಲ್ಲಿ ಸ್ಪರ್ಧಿಸುತ್ತೇನೆ ಎನ್ನುವುದನ್ನು ತೀರ್ಮಾನ ಮಾಡಲು ಯಡಿಯೂರಪ್ಪ ಯಾರು? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ನಾನು ಎಲ್ಲಿ ಸ್ಪರ್ಧಿಸಬೇಕು ಎಂದು ನನ್ನ ಕ್ಷೇತ್ರದ ತೀರ್ಮಾನವನ್ನು ಕಾಂಗ್ರೆಸ್ ಮಾಡುತ್ತದೆ ಎಂದರು.
ಯಡಿಯೂರಪ್ಪ ಪಾಪ ನನ್ನ ಮೇಲೆ ಬಹಳ ಪ್ರೀತಿಯಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡು ಅಂತ ಹೇಳಿದ್ದಾರೆ, ಅವರಿಗೆ ಧನ್ಯವಾದ. ಆದರೆ, ಯಡಿಯೂರಪ್ಪಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ಮೇಲೆ ಸ್ವಲ್ಪ ಡಿಸ್ಟರ್ಬ್ ಆಗಿದ್ದಾರೆ. ದೇವರು ಅವರಿಗೆ ಆಯುಷ್ಯ, ಆರೋಗ್ಯ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.