ಕಲಬುರಗಿ: ಎಲ್ಲಾ ಪರೀಕ್ಷೆ ಗಳು ಪಾರದರ್ಶಕವಾಗಿ ನಡೆಯುತ್ತವೆ. ಇದರಲ್ಲಿ ಯಾರೆ ಭಾಗಿಯಾದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಹೇಳಿದರು.
ನಗರದಲ್ಲಿ ಜಯದೇವ ಆಸ್ಪತ್ರೆಯ ಕಟ್ಟಡ ಕಾಮಗಾರಿ ಪರಿಶೀಲಿಸಿದ ಬಳಿಕ ಎಫ್ಡಿಎ ಮತ್ತು ಎಸ್ ಡಿಎ ಪರೀಕ್ಷೆ ಗಳಲ್ಲಿ ಅಕ್ರಮವಾಗಿ ಬ್ಲೂಟೂತ್ ಡಿವೈಸ್ ಬಳಕೆ ಕುರಿತಂತೆ ಇಲ್ಲಿ ಸುದ್ದಿಗಾರ ಜತೆ ಮಾತನಾಡಿದ ಅವರು, ಈ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದೆವೆ. ಅಕ್ರಮಕ್ಕೆ ಅವಕಾಸ ನೀಡದೆ ದಕ್ಷ ಮತ್ತು ಪಾರದರ್ಶಕ ಆಡಳಿತ ನೀಡಲು ಬದ್ಧರಾಗಿದ್ದು, ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರು ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.