ನೀರಿನ ಟ್ಯಾಂಕ್‌ನೊಳಗೆ ಯುವಕನ ಶವ

0
12

ಮಂಗಳೂರು: ಪಂಚಾಯತ್‌ನ ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನೊಬ್ಬನ ಮೃತದೇಹ ಮಂಗಳವಾರ ಬೆಳಗ್ಗೆ ಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ತೋಟದಮೂಲೆ ಎಂಬಲ್ಲಿನ ನಿವಾಸಿ ಚೆನ್ನಪ್ಪ ಎಂಬವರ ಪುತ್ರ ಕೂಲಿ ಕಾರ್ಮಿಕ ದಿನೇಶ್ (೧೮) ಮೃತಪಟ್ಟ ಯುವಕ. ದಿನೇಶ್‌ಗೆ ಮದ್ಯಪಾನದ ಚಟವಿತ್ತು ಎನ್ನಲಾಗಿದ್ದು, ಮೂರು ದಿನಗಳ ಹಿಂದೆ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಇಲ್ಲಿನ ಪಂಚಾಯತ್ ನೀರು ಸರಬರಾಜಿನ ಓವರ್ ಹೆಡ್ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ.
ವಿದ್ಯುತ್ ಸಮಸ್ಯೆಯ ಕಾರಣದಿಂದಾಗಿ ಕಳೆದ ಮೂರು ದಿನಗಳಿಂದ ಈ ಓವರ್ ಹೆಡ್ ಟ್ಯಾಂಕ್‌ನಲ್ಲಿ ನೀರು ತುಂಬಿಸಿರಲಿಲ್ಲ. ಸೋಮವಾರ ವಿದ್ಯುತ್ ಸಮಸ್ಯೆ ಸರಿಪಡಿಸಲಾಗಿತ್ತು. ಬಳಿಕ ಟ್ಯಾಂಕ್‌ಗೆ ನೀರು ತುಂಬಿಸಲಾಗಿತ್ತು. ಮಂಗಳವಾರ ನೀರು ಬಿಡುವಾತ ನೀರು ತುಂಬಿರುವ ಬಗ್ಗೆ ಟ್ಯಾಂಕ್‌ಗೆ ಹತ್ತಿ ಪರಿಶೀಲನೆ ನಡೆಸುತ್ತಿದ್ದಾಗ ಮೃತದೇಹ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಅಪಘಾತ: ವಿದ್ಯಾರ್ಥಿ ಸಾವು
Next articleಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಕಾನೂನಿನ ಕ್ರಮ : ಸಿಎಂ ಬೊಮ್ಮಾಯಿ