Home Advertisement
Home ನಮ್ಮ ಜಿಲ್ಲೆ ಧಾರವಾಡ ನೈರುತ್ಯ ರೈಲ್ವೆ ವಲಯದ ನೂತನ ಪ್ರಧಾನ ವ್ಯವಸ್ಥಾಪಕರಾಗಿ ಅರವಿಂದ್ ಶ್ರೀವಾಸ್ತವ

ನೈರುತ್ಯ ರೈಲ್ವೆ ವಲಯದ ನೂತನ ಪ್ರಧಾನ ವ್ಯವಸ್ಥಾಪಕರಾಗಿ ಅರವಿಂದ್ ಶ್ರೀವಾಸ್ತವ

0
115

ಹುಬ್ಬಳ್ಳಿ: ಅರವಿಂದ್ ಶ್ರೀವಾಸ್ತವರವರು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಭಾರತೀಯ ರೈಲ್ವೆಯೊಂದಿಗೆ ಮೂರೂವರೆ ದಶಕಗಳ ಕಾಲ ಒಡನಾಟ ಹೊಂದಿದ್ದಾರೆ. ಕಲ್ಕತ್ತಾದ ಪೂರ್ವ ರೈಲ್ವೆ, ವಾರಾಣಸಿಯ ಡೀಸೆಲ್ ಲೋಕೋಮೋಟಿವ್ ವರ್ಕ್ಸ್, ನವ ದೆಹಲಿಯ ರೈಲ್ವೆ ಮಂಡಳಿ, ಬೆಂಗಳೂರಿನ ರೈಲ್ ವ್ಹೀಲ್ ಫ್ಯಾಕ್ಟರಿ ಮತ್ತು ಕಲ್ಕತ್ತಾ ಆಗ್ನೇಯ ರೈಲ್ವೆ ಸೇರಿದಂತೆ ವಿವಿಧ ಇಲಾಖೆಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.