Home Advertisement
Home ತಾಜಾ ಸುದ್ದಿ ಬೆಂಬಲ ಬೆಲೆ ಯೋಜನೆ: ರೈತರಿಗೆ ಸಮರ್ಪಕವಾಗಿ ಹಣ

ಬೆಂಬಲ ಬೆಲೆ ಯೋಜನೆ: ರೈತರಿಗೆ ಸಮರ್ಪಕವಾಗಿ ಹಣ

0
199

ಬೆಂಗಳೂರು: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಗೆ ಸಮರ್ಪಕವಾಗಿ ಹಣ ಪಾವತಿ ಆಗದೆ ಇರುವ ಸಮಸ್ಯೆಗೆ ಸ್ಪಂದಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅವರು ಗೃಹ ಕಚೇರಿ ಕೃಷ್ಣಾದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಅಹವಾಲುಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿ, ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸುವ ಮೂಲಕ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಗೆ ಸಮರ್ಪಕವಾಗಿ ಹಣ ಪಾವತಿಯಾಗುವಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.