SK Home Ad
Home ತಾಜಾ ಸುದ್ದಿ ರೈಲ್ವೆ ಹಳಿಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

ರೈಲ್ವೆ ಹಳಿಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

0
138

ಹುಬ್ಬಳ್ಳಿ: ಉತ್ತರ ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ‌ ನಾಗರಾಜ ಹಂಚಿನಮನಿ ರೈಲಿಗೆ ಬಿದ್ದು ಮೃತಪಟ್ಟಿದ್ದಾರೆ.
ಸೋಮವಾರ ಬೆಳಗ್ಗೆ ಉಣಕಲ್ ಹತ್ತಿರ ರೈಲು ಹಳಿಗೆ ಬಿದಿದ್ದಾರೆ. ಉತ್ತರ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಯಾಗಿದ್ದರು. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು, ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.