ಶಬರಿಮಲೆ: ಕರ್ನಾಟಕ ಯಾತ್ರಿಕರ ಬಸ್ ಪಲ್ಟಿ

0
26

ವಯನಾಡ: ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರು ಯಾತ್ರಾರ್ಥಿಗಳ ಬಸ್ ಕೇರಳದ ವಯನಾಡಿನಲ್ಲಿ ಪಲ್ಟಿಯಾದ ಘಟನೆ ನಡೆದಿದೆ,
ಇಂದು ಬೆಳಗಿನ ಜಾವ 6 ಗಂಟೆಗೆ ಈ ಘಟನೆ ಸಂಭವಿಸಿದ್ದು. ಅಪಘಾತದಲ್ಲಿ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ. ಶಬರಿಮಲೆಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ಕರ್ನಾಟಕದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿದೆ.
ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Previous articleನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಗೆ ಬಲಿ
Next article‘ಬೆಂಗಳೂರು ಟೆಕ್‌ ಸಮಿಟ್‌’ಗೆ ಇಂದು ಚಾಲನೆ