​ಶಾಸಕ ಅಜಯ್​ ಸಿಂಗ್​ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

0
40
ಆತ್ಮಹತ್ಯೆ

ಕಲಬುರಗಿ: ಡಾ. ಅಜಯಸಿಂಗ್ ಅವರ ನಿವಾಸದ ಆವರಣದಲ್ಲಿ ವ್ಯಕ್ತಿ ನೇಣಿಗೆ ಶರಣಾದ ಘಟನೆ ನಡೆದಿದೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದ್ದು.
ದೇವಪ್ಪ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಕಲಬುರಗಿಯ ಶರಣ ನಗರ ಬಡಾವಣೆಯಲ್ಲಿರುವ ಜೇವರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ‌, ಕೆಕೆಆರ್.ಡಿಬಿ ಅಧ್ಯಕ್ಷರಾಗಿರುವ ಡಾ. ಅಜಯಸಿಂಗ್ ಅವರ ಮೆನೆಯ ಆವರಣದಲ್ಲಿ ಈ ಘಟನೆ ನಡೆದಿದೆ. ಮೃತ ದೇವಪ್ಪ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿಯಾಗಿದ್ದು, ​ಶಾಸಕ ಅಜಯ್​ ಸಿಂಗ್​ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ದೇವಪ್ಪ ಅವರ ಪತ್ನಿ ಮೂರು ವರ್ಷದ ಹಿಂದೆ ಮೃತಪಟ್ಟಿದ್ದರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಪುರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿ ಆತ್ಮಹತ್ಯೆ ಕಾರಣ ಎನೆಂಬುದು ಪತ್ತೆ ಹಚ್ಚುತ್ತಿದ್ದಾರೆ.

Previous articleಆಚಾರವಿಲ್ಲದ ನಾಲಗೆಗೆ ಆಡಿ ತಣಿಯುವ ವಿಕೃತಿ
Next articleಜಾಣರಗುರು ಪತ್ರಿಕೆ