ಸೆಕ್ಯೂರಿಟಿ ಗಾರ್ಡ್ ಕೂತಲ್ಲೇ ಹೃದಯಾಘಾತದಿಂದ ನಿಧನ

ಚಿಕ್ಕಮಗಳೂರು: ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಕೂತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ತಾಲೂಕಿನ ಹಿರೇಗೌಜ ಗ್ರಾಮದ ಶಿವಮೂರ್ತಿ (50) ಬೇಲೂರು ರಸ್ತೆಯಲ್ಲಿರುವ ಬೈಕ್ ಶೋ ರೂಮ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತಗೊಂಡು ಮೃತಪಟ್ಟಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.