ಹುಬ್ಬಳ್ಳಿ: ಕೊಲೆ, ಸುಲಿಗೆ, ದರೋಡೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ಆರೋಪಿ ಮಂಜುನಾಥ ಉರ್ಫ ಸೈಂಟಿಸ್ಟ್ ಮಂಜ್ಯಾ ಭಂಡಾರಿ ಮತ್ತು ಇನ್ನಿಬ್ಬರ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ತಿಳಿಸಿದರು.
ರವಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗೋಪನಕೊಪ್ಪದ ಶಿವಕಾಲೋನಿಯ ಕುಖ್ಯಾತ ಆರೋಪಿ ಮಂಜುನಾಥ @ ಸೈಂಟಿಸ್ಟ್ ಮಂಜ್ಯಾ ಬಂಡಾರಿಯನ್ನು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದರು.
ಅಬ್ದುಲಖಾದರ ಕುಂದಗೋಳ ಎಂಬುವರ ಮೇಲೆ ಕೊಲೆಗೆ ಯತ್ನಿಸಿದ್ದನು. ಸಾಥ್ ನೀಡಿದ ಮಾಲಾ ಹಾಗೂ ಮುಸ್ಕಾನ್ ಎಂಬುವರನ್ನು ಬಂಧಿಸಲಾಗಿದೆ.
ಆರೋಪಿ ಮಂಜುನಾಥ @ ಸೈಂಟಿಂಟ್ ಮಂಜ್ಯಾ ಬಂಡಾರಿ ಈತನು ಈ ಹಿಂದೆ ಕೊಲೆ, ಕೊಲೆ ಯತ್ನ, ಧರೋಡೆ, ಮನೆಗಳ್ಳತನ, ಹಲ್ಲೆ ಪ್ರಕರಣ, ಎನ್ಡಿಪಿಎಸ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರಿಂದ ಈತನ ಮೇಲೆ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 30 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದರು.
ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ್ ಸಿ.ಆರ್. ಇದ್ದರು.