ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ

0
19

ಮಂಗಳೂರು: ಕರಾವಳಿಯ ಖ್ಯಾತ ಪತ್ರಕರ್ತ ಮನೋಹರ್ ಪ್ರಸಾದ್ (64) ಇಂದು ನಸುಕಿನ ಜಾವ ನಿಧನ ಹೊಂದಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು. ಮನೋಹರ ಪ್ರಸಾದ್ ತಮ್ಮ ಸಾಧನೆ ಹಾಗೂ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಪಡೆದಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಸೇವೆಯಿಂದ ನಿವೃತ್ತಿಗೊಂಡಿದ್ದರು. ಬಳಿಕ ಅವರು ಅನಾರೋಗ್ಯಕ್ಕೀಡಾಗಿದ್ದರು. ಇಂದು ಮುಂಜಾನೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

Previous articleಸಂಸದರ ಆಪ್ತನ ಭೀಕರ ಕೊಲೆ
Next articleಸಂಯುಕ್ತ ಕರ್ನಾಟಕ ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ