ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಭರತ್ ಎಸ್ ಅವರನ್ನು ನೇಮಕ ಮಾಡಿ ಬುಧವಾರ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಭರತ್ ಎಸ್ ಅವರು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದು ಹೆಚ್ಚುವರಿಯಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಿಸಿದೆ. ಈಚೆಗೆ ಪಾಲಿಕೆ ಆಯುಕ್ತರಾಗಿದ್ದ ಡಾ.ಬಿ.ಗೋಪಾಲಕೃಷ್ಣ ಅವರು ವರ್ಗಾವಣೆಯಾಗಿದ್ದರು.
