SK Home Ad
Home ತಾಜಾ ಸುದ್ದಿ ಆಪ್‌ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ

ಆಪ್‌ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ

0
130

ನವದೆಹಲಿ: ಆಮ್‌ ಆದ್ಮಿ ಪಕ್ಷವನ್ನು ಮುಗಿಸಲು ಬಿಜೆಪಿ ‘ಆಪರೇಷನ್ ಜಾಡು’ ಅಡಿಯಲ್ಲಿ ಪ್ರಯತ್ನಿಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ನಾವು ದೊಡ್ಡದಾಗಿ ಬೆಳೆಯಬಾರದು ಮತ್ತು ಅವರಿಗೆ ಸವಾಲಾಗಬಾರದು ಎನ್ನುವುದು ಬಿಜೆಪಿ ಉದ್ದೇಶವಾಗಿದೆ. ಅದಕ್ಕಾಗಿಯೇ ಅವರು ‘ಆಪರೇಷನ್ ಜಾಡು’ ಆರಂಭಿಸಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಕೃಪೆ ಇಲ್ಲದಿದ್ದರೆ ನಮ್ಮ ಪಕ್ಷ ಕಳೆದ ವರ್ಷದಲ್ಲಿಯೇ ನಾಶವಾಗುತ್ತಿತ್ತು. ಜನರ ಸೇವೆ ಮಾಡುವುದೇ ನಮ್ಮ ಉದ್ದೇಶವಾಗಿದೆ ಎಂದರು.