Home Advertisement
Home ಅಪರಾಧ ಈಜಲು ಹೋದ ತಂದೆ ಮಕ್ಕಳ ಸಾವು

ಈಜಲು ಹೋದ ತಂದೆ ಮಕ್ಕಳ ಸಾವು

0
151

ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಸೇರಿ ಎರಡು ಮಕ್ಕಳು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಿಡಗುಂದಿ ಗ್ರಾಮದ ಹುಕ್ಕೇರಿ ತೋಟ ಮಗದುಮ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕಲ್ಲಪ್ಪ ಗಾಣಿಗೇರ(೩೬), ಮಕ್ಕಳಾದ ಮನೋಜ(11) ಹಾಗೂ ಮದನ(9) ಎಂದು ಗುರುತಿಸಲಾಗಿದೆ. ಈ ಕುರಿತು ರಾಯಬಾಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.