SK Home Ad
Home ಸುದ್ದಿ ದೇಶ ಎಸ್.ಎಂ. ಕೃಷ್ಣ ಸೇರಿದಂತೆ 54 ಗಣ್ಯರಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ಎಸ್.ಎಂ. ಕೃಷ್ಣ ಸೇರಿದಂತೆ 54 ಗಣ್ಯರಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

0
140

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 54 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿ ಗೌರವಿಸಿದರು. ರಾಷ್ಟ್ರದ ಪ್ರಜಾಪ್ರಭುತ್ವ ನಾಲ್ಕು ಸ್ತಂಭಗಳಾದ ವಿಧಾನಸಭೆ, ವಿಧಾನಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ ಕಳೆದ ಅರವತ್ತು ವರ್ಷಗಳ ಕಾಲ ನಾಡಿನ, ರಾಷ್ಟ್ರದ ಸೇವೆಗೈದ ಕೃಷ್ಣ ರವರು ತಾವು ನಿರ್ವಹಿಸಿದ ಪ್ರತಿ ಹುದ್ದೆಯಲ್ಲೂ ಹೆಜ್ಜೆಗುರುತು ಮೂಡಿಸಿದವರು.