ಐಪಿಎಸ್ ಅಧಿಕಾರಿಗಳ ವರ್ಗಾವಣೆ

0
20

ಬೆಂಗಳೂರು: ರಾಜ್ಯ ಸರ್ಕಾರವು 7 ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದೆ.
ಶಾಂತನು ಸಿನ್ಹಾ ಅವರನ್ನು ಸಿಐಡಿ ವಿಭಾಗದ ಡಿಐಜಿಪಿ ಹುದ್ದೆಗೆ ನೇಮಕ ಮಾಡಲಾಗಿದೆ. ಯಾದಗಿರಿಯ ಎಸ್​ಪಿ ಜಿ.ಸಂಗೀತಾ (ಐಪಿಎಸ್​) ಅವರನ್ನು ಅಪರಾಧ ತನಿಖಾ ಇಲಾಖೆಯ ಎಸ್‌ಪಿಯಾಗಿ ಹಾಗೂ ಅಪರಾಧ ತನಿಖಾ ಇಲಾಖೆಯ ಎಸ್​ಪಿ ಪೃಥ್ವಿಕ್ ಶಂಕರ್(ಐಪಿಎಸ್​) ಅವರನ್ನು ಯಾದಗಿರಿಯ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಸಿಟಿ ಕ್ರೈಂ ವಿಭಾಗದ ಡಿಸಿಪಿ ಅಬ್ದುಲ್​ ಅಹದ್​ ಅವರನ್ನು, ಬಿಎಂಟಿಸಿ ಭದ್ರತಾ ಮತ್ತು ವಿಚಕ್ಷಣೆ ವಿಭಾಗದ ನಿರ್ದೇಶಕ ಐಎಎಸ್​ ಅಧಿಕಾರಿ ಸದಾಶಿವ ಪ್ರಭು ಬಿ. ವರ್ಗಾವಣೆ ಹಿನ್ನೆಲೆಯಲ್ಲಿ ಆ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ರಾಜ್ಯ ಅಪರಾಧ ದಾಖಲೆ ಬ್ಯೂರೋದ ಎಸ್​ಪಿ ಲಕ್ಷ್ಮಣ್ ನಿಂಬರಗಿ(ಐಪಿಎಸ್​) ಅವರನ್ನು ಖಾಲಿಯಿದ್ದ ವಿಜಯಪುರ ಎಸ್​ಪಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ. ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಉಪನಿರ್ದೇಶಕ ಚೆನ್ನಬಸವಣ್ಣ ಲಂಗೋಟಿ(ಐಪಿಎಸ್​) ಅವರನ್ನು ಡಾ.ಎಂ.ಬಿ.ಬೋರಲಿಂಗಯ್ಯ (ಐಪಿಎಸ್) ಅವರಿಂದ ತೆರವಾಗಿರುವ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಭಯೋತ್ಪಾದನೆ ನಿಗ್ರಹ ಕೇಂದ್ರ ಬೆಂಗಳೂರಿನ ಎಸ್​ಪಿ ಶಿವಾಂಶು ರಜಪೂತ್ ಅವರನ್ನು ರಾಜ್ಯ ಅಪರಾಧ ದಾಖಲೆಗಳ ವಿಭಾಗದ ಎಸ್​ಪಿಯಾಗಿದ್ದ ಲಕ್ಷ್ಮಣ ನಿಂಬರ್ಗಿ ವರ್ಗಾವಣೆ ಹಿನ್ನೆಲೆಯಲ್ಲಿ ಆ ಜಾಗಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

Previous articleರಾಜ್ಯಾದ್ಯಂತ ಜನ ಜಾಗೃತಿ ಅಭಿಯಾನ
Next articleಲಂಚ ಪಡೆಯುತ್ತಿದ್ದ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ