ಬೆಂಗಳೂರು: 76ನೇ ವರ್ಷದ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪಿಟೀಲು ವಾದಕ ಲಕ್ಷ್ಮೀನಾರಾಯಣ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸೇರಿದಂತೆ ಕರ್ನಾಟಕದ ಒಟ್ಟು 9 ಮಂದಿ ಸಾಧಕರಿಗೆ 2025ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಲಭಿಸಿವೆ, ಕರುನಾಡಿನ ಎಲ್ಲಾ 9 ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಕಲೆ, ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ, ವೈದ್ಯಕೀಯ, ವಿಜ್ಞಾನ ಮತ್ತು ತಂತ್ರಜ್ಞಾನ ಮುಂತಾದ ಕ್ಷೇತ್ರಗಳಲ್ಲಿನ ಅದ್ವಿತೀಯ ಸಾಧನೆಗಾಗಿ 2025ನೇ ಸಾಲಿನ ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿರುವ ಕರುನಾಡಿನ ಎಲ್ಲಾ 9 ಸಾಧಕರಿಗೆ ಅಭಿನಂದನೆಗಳು.
ನಿಮ್ಮೆಲ್ಲರ ಕರ್ತವ್ಯ ನಿಷ್ಠೆ, ಸೇವಾ ಮನೋಭಾವ ಹಾಗೂ ಸಾಮಾಜಿಕ ಕಾಳಜಿ ಯುವ ಸಮುದಾಯಕ್ಕೆ ಮಾದರಿಯಾಗಿದೆ. ನಿಮ್ಮ ಸಾಧನೆ ಕಂಡು ಇಡೀ ನಾಡು ಹೆಮ್ಮೆ ಪಡುತ್ತಿದೆ ಎಂದಿದ್ದಾರೆ.