ಕರ್ನಾಟಕದ ಕುಂಭಮೇಳ: ಭಕ್ತರಿಗೆ ಶುಭ ಕೋರಿದ ಪ್ರಲ್ಹಾದ ಜೋಶಿ

0
32

ಕಾವೇರಿ, ಕಪಿಲಾ ಹಾಗೂ ಸ್ಫಟಿಕ ಸರೋವರಗಳು ಸೇರುವ ತ್ರಿವೇಣಿ ಸಂಗಮ

ಬೆಂಗಳೂರು: ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿರುವ ಸಕಲ ಭಕ್ತರಿಗೆ ಶುಭಾಶಯಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೋರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ಕಾವೇರಿ, ಕಪಿಲಾ ಹಾಗೂ ಸ್ಫಟಿಕ ಸರೋವರಗಳು ಸೇರುವ ಈ ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಫೆ. 12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಈ ಕರ್ನಾಟಕದ ಕುಂಭಮೇಳ ದಕ್ಷಿಣ ಭಾರತದ ಕುಂಭಮೇಳವೆಂದು ಖ್ಯಾತಿ ಹೊಂದಿದ್ದು, ಇದರಲ್ಲಿ ಪಾಲ್ಗೊಳ್ಳುತ್ತಿರುವ ಸಕಲ ಭಕ್ತರಿಗೆ ಶುಭಾಶಯಗಳು ಮತ್ತು ಕುಂಭಮೇಳ ಯಶಸ್ವಿಯಾಗಲಿ ಎಂದು ನಾನು ಹಾರೈಸುತ್ತೇನೆ ಎಂದಿದ್ದಾರೆ.

Previous articleಏರೋ ಇಂಡಿಯಾ ಏರ್ ಶೋಗೆ ಚಾಲನೆ
Next articleಬಿಜೆಪಿ ಸರ್ಕಾರದ ಯೋಜನೆಗಳು ಎಂಬ ಕಾರಣಕ್ಕೆ ಮೂಲೆಗೆ…