ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಧರ್ಮಗುರು(ಮೌಲ್ವಿ) ಪ್ರಾರ್ಥನೆ(ನಮಾಜು) ಸಲ್ಲಿಸಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಈಚೆಗೆ ನಡೆದ ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಸ್ಡಿಪಿಐ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದು, ಗುರುವಾರ ಅಧಿಕಾರ ಹಂಚಿಕೆಯಾಗಿದೆ.
ಕಾಂಗ್ರೆಸ್ನ ಜಯಂತಿ ಖಾರ್ವಿ ಗ್ರಾ.ಪಂ. ಅಧ್ಯಕ್ಷೆಯಾದರೆ, ಎಸ್ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಉಪಾಧ್ಯಕ್ಷ ಅಧಿಕಾರ ಸ್ವೀಕಾರ ವೇಳೆ ಎಸ್ಡಿಪಿಐ ಮುಖಂಡರು ಮೌಲ್ವಿಯನ್ನು ಕರೆಸಿ ನಮಾಜು ಮಾಡಿಸಿರುವ ವೀಡಿಯೊ ವೈರಲ್ ಆಗಿದ್ದು, ಇದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ.