Home Advertisement
Home ಅಪರಾಧ ತಲೆ ಮೇಲೆ ಕಲ್ಲು ಹಾಕಿ ಯುವಕನ ಬರ್ಬರ ಹತ್ಯೆ

ತಲೆ ಮೇಲೆ ಕಲ್ಲು ಹಾಕಿ ಯುವಕನ ಬರ್ಬರ ಹತ್ಯೆ

0
116

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ.

ರೇವಣಸಿದ್ದಪ್ಪ ಪಾಳೆಕಾರ್ (33) ಕೊಲೆಯಾದ ಯುವಕನಾಗಿದ್ದು, ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಹೋದಾಗ ಗಲಾಟೆಯಾಗಿ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದ್ದು, ಸ್ನೇಹಿತರೆ ಕೊಲೆ ಮಾಡಿ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೋಲಿಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.