ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

0
19

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ತಾಲ್ಲೂಕಿನ ಎಲೆ ಬಿಚ್ಚಾಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಮುತ್ತುರಾಜ್ (24), ಮದನ್ (20) ಎಂಬುವವರು ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮೂಲದವರಾಗಿದ್ದಾರೆ. ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬಂದಿದ್ದ ಕುಟುಂಬ ನದಿಯಲ್ಲಿ ಈಜಲು ಹೋಗಿ ತಗ್ಗು ಪ್ರದೇಶದಲ್ಲಿ ಸಿಲುಕಿದ್ದಾರೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Previous articleಡಿಪೋದಲ್ಲೇ ಕೆಎಸ್‌ಆರ್‌ಟಿಸಿ ಚಾಲಕ ವಿಷ ಸೇವನೆ
Next articleಸಂಭ್ರಮದ ಸಂಗಮೇಶ್ವರ ರಥೋತ್ಸವ