ನಾಮಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯ

0
9

ಬೆಂಗಳೂರು: ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾದಲ್ಲಿ ಪೋಸ್ಟ್‌ ಮಾಡಿರುವ ಅವರು “ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ.

ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.

ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ ಎಂದಿದ್ದಾರೆ.

Previous articleದತ್ತಮಾಲಾಧಾರಿಗಳಿಂದ ಪಡಿಸಂಗ್ರಹ
Next articleಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್ ಬೆಲ್ಲದ್‌ ನೇಮಕ