Home Advertisement
Home ತಾಜಾ ಸುದ್ದಿ ಪಾಕ್ ಬಣ್ಣ ಬಯಲು ಮಾಡಲು ಸರ್ವಪಕ್ಷ ನಿಯೋಗ ರಚನೆ

ಪಾಕ್ ಬಣ್ಣ ಬಯಲು ಮಾಡಲು ಸರ್ವಪಕ್ಷ ನಿಯೋಗ ರಚನೆ

0
129

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಯೋತ್ಪಾದನೆ ವಿರುದ್ಧ ಭಾರತದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲು ಸರ್ವಪಕ್ಷ ನಿಯೋಗದ ತಂಡ ರಚನೆಯಾಗಿದೆ,
ಕಾಂಗ್ರೆಸ್ ಸಂಸದ ಶಶಿ ತರೂರ್​ ಸೇರಿದಂತೆ ವಿರೋಧ ಪಕ್ಷದ ಇಬ್ಬರು ಮತ್ತು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಲ್ವರು ಸೇರಿದಂತೆ ಆರು ಇತರ ಸಂಸದರನ್ನುಈ ನಿಯೋಗದಲ್ಲಿ ಹೆಸರಿಸಿದೆ, ಈ ಕುರಿತಂತೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಭಾರತದ “ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯ ಸಂದೇಶ”ವನ್ನು ಹೊತ್ತುಕೊಂಡು ಏಳು ಸರ್ವಪಕ್ಷ ನಿಯೋಗಗಳು ಶೀಘ್ರದಲ್ಲೇ ಪ್ರಮುಖ ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ. ರಾಜಕೀಯವನ್ನು ಮೀರಿ, ಭಿನ್ನಾಭಿಪ್ರಾಯಗಳನ್ನು ಮೀರಿ ರಾಷ್ಟ್ರೀಯ ಏಕತೆಯ ಪ್ರಬಲ ಪ್ರತಿಬಿಂಬ ಇದು ಎಂದಿದ್ದಾರೆ. ಇನ್ನು ಈ ಸರ್ವಪಕ್ಷ ನಿಯೋಗದಲ್ಲಿ ಮಾಜಿ ರಾಜತಾಂತ್ರಿಕರಾಗಿರುವ ಶಶಿ ತರೂರ್, ಕೇಂದ್ರವು ವಿರೋಧ ಪಕ್ಷದ ನಾಯಕರಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದೆ ಕನಿಮೋಳಿ ಕರುಣಾನಿಧಿ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ ಪ್ರಮುಖರಾಗಿ ಕೆಲಸ ಮಾಡಲಿದ್ದಾರೆ. ಈ ನಿಯೋಗಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರನ್ನು ಭೇಟಿ ಮಾಡಲಿವೆ.

ವಿವಿಧ ಪಕ್ಷಗಳ ಸಂಸತ್ತಿನ ಸದಸ್ಯರು, ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಪ್ರತಿಷ್ಠಿತ ರಾಜತಾಂತ್ರಿಕರು ಪ್ರತಿ ನಿಯೋಗದ ಭಾಗವಾಗಿರುತ್ತಾರೆ.

ಕೆಳಗಿನ ಸಂಸತ್ತಿನ ಸದಸ್ಯರು ನಿಯೋಗಗಳನ್ನು ಮುನ್ನಡೆಸುತ್ತಾರೆ:

1) ಶಶಿ ತರೂರ್, INC

2) ರವಿಶಂಕರ್ ಪ್ರಸಾದ್, ಬಿಜೆಪಿ

3) ಸಂಜಯ್ ಕುಮಾರ್ ಝಾ, ಜೆಡಿಯು

4) ಬೈಜಯಂತ್ ಪಾಂಡ, ಬಿಜೆಪಿ

5) ಕನಿಮೋಳಿ ಕರುಣಾನಿಧಿ, ಡಿಎಂಕೆ

6) ಸುಪ್ರಿಯಾ ಸುಳೆ, ಎನ್‌ಸಿಪಿ

7) ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ

Previous articleಕೊಡಗು ಸಂಪತ್ ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ ಆರೋಪಿ ಬಂಧನ
Next articleಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷಾ ಅವಧಿ ವಿಸ್ತರಣೆ