ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ದಾಳಿ: ರೌಡಿ ಕಾಲಿಗೆ ಗುಂಡೇಟು

0
36

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ ರೌಡಿಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಲಾಗಿದೆ.
ಭದ್ರಾವತಿ ಪೇಪರ್‌ಟೌನ್ ಠಾಣೆ ಇನ್ಸ್‌ಪೆಕ್ಟರ್ ನಾಗಮ್ಮ, ರೌಡಿಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಕೊಲೆ ಯತ್ನ ಪ್ರಕರಣದಲ್ಲಿ ರೌಡಿಶೀಟರ್ ಕಡೇಕಲ್ ಅಬೀದ್ ತಲೆ ಮರೆಸಿ ಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಈತನ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇನ್ಸ್‌ಪೆಕ್ಟರ್ ನಾಗಮ್ಮ ನೇತೃತ್ವದ ತಂಡ ಬಂಧಿಸಲು ಯತ್ನಿಸಿತು. ಈ ಸಂದರ್ಭ ಕಡೇಕಲ್ ಅಬೀದ್ ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ದಾಳಿ ನಡೆಸಿದ್ದಾನೆ
ಈ ವೇಳೆ ಇನ್ಸ್‌ಪೆಕ್ಟರ್ ನಾಗಮ್ಮ, ಕಡೇಕಲ್ ಅಬೀದ್‌ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಅರುಣ್‌ಕುಮಾರ್ ಮತ್ತು ಕಡೇಕಲ್ ಅಬೀದ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಬೀದ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ರಾಬರಿ, ಕೊಲೆ ಯತ್ನ ಸೇರಿ ಒಟ್ಟು ೨೦ ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ತಿಳಿಸಿದ್ದಾರೆ.

Previous articleಹೊಲಕ್ಕೆ ದಾರಿ ಸಂಬಂಧ ಚಿಕ್ಕಪ್ಪನ ಮೇಲೆ ಹಲ್ಲೆ
Next articleಲಂಚ ಸ್ವೀಕರಿಸಿದ ಡಿವೈಎಸ್ಪಿ ಲೋಕಾಯುಕ್ತ ಬಲೆಗೆ