Home ಅಪರಾಧ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ

ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ

0

ಮುಂಬೈ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡಲಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.
ಮುಂದಿನ 10 ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲವಾದರೆ, ಮುಂಬೈನಲ್ಲಿ ಇತ್ತೀಚೆಗೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿಯವರ ಹತ್ಯೆ ಆದ ರೀತಿಯಲ್ಲೇ ಯೋಗಿಯವರ ಹತ್ಯೆಯೂ ಆಗಲಿದೆ ಎಂದು ಅನಾಮಿಕ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಹಾಕಿದ್ದಾನೆ. ಇನ್ನು ಈ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.

Exit mobile version