Home Advertisement
Home ನಮ್ಮ ಜಿಲ್ಲೆ ಬೆಳಗಾವಿಗೆ ಭೇಟಿ ನೀಡಿದ ಸತ್ಯಶೋಧನಾ ಸಮಿತಿ

ಬೆಳಗಾವಿಗೆ ಭೇಟಿ ನೀಡಿದ ಸತ್ಯಶೋಧನಾ ಸಮಿತಿ

0
83

ಬೆಳಗಾವಿ: ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ಅಮಾನವೀಯ ಕೃತ್ಯ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿರುವ 5 ಸದಸ್ಯರ ಸತ್ಯಶೋಧನಾ ಸಮಿತಿ ತಂಡ ಶನಿವಾರ ಬೆಳಗಾವಿಗೆ ಭೇಟಿ ನೀಡಿ ಸ್ಥಳೀಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿತು. ಆಸ್ಪತ್ರೆಯಲ್ಲಿ ಸಂತ್ರಸ್ತರನ್ನು ಭೇಟಿ ಮಾಡುವ ಮೊದಲು ಅವರು ನಡ್ಡಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ವಿವರಿಸಿದರು. ಬಿಜೆಪಿ ಸಮಿತಿಯು ಬೆಳಗಾವಿಯ ಆಸ್ಪತ್ರೆಯಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿ ಡಿಸೆಂಬರ್ 11 ರಂದು ಆಕೆ ಎದುರಿಸಿದ ಅನ್ಯಾಯವನ್ನು ಆಲಿಸಿತು. ಸತ್ಯಶೋಧನಾ ಸಮಿತಿಯ ತಂಡದಲ್ಲಿ ಸಂಸದ ಅಪ್ರಜಿತಾ ಸಾರಂಗಿ, ಸಂಸದೆ ಸುನೀತಾ ದುಗ್ಗಲ್, ಸಂಸದ ಲಾಕೆಟ್ ಚಟರ್ಜಿ, ಸಂಸದೆ ರಂಜಿತಾ ಕೋಲಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಇದ್ದರು. ಈ ಸಮಿತಿಯು ನಡ್ಡಾ ಅವರಿಗೆ ವರದಿ ಸಲ್ಲಿಸಲಿದೆ. ಬೆಳಗಾವಿಯ ಮಹಿಳೆಯ ಬೆತ್ತಲೆ ಪ್ರಕರಣವನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನಾ ಧರಣಿ ನಡೆಸಿದೆ.